30.9 C
Mumbai
June 8, 2026
Mumbai News Kannada
ಸುದ್ದಿ

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು





ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಭಟ್ಯಾಡಿ ಸುಲಭ ಗೆಲುವು ಸಾಧಿಸಿದ್ದಾರೆ.


ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಒಟ್ಟು 5907 ಮತಗಳಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು 3655 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನ ರಾಜು ಪೂಜಾರಿ 1,958 ಮತಗಳನ್ನು ಪಡೆದರೆ ಎಸ್ ಡಿ ಪೈ ಅಭ್ಯರ್ಥಿ 195, ದಿನಕರ್ ಉಲ್ಲಾಳ್ 9 ಮತಗಳನ್ನು ಪಡೆದರೆ, 90 ಮತಗಳು ಅಮಾನ್ಯಗೊಂಡಿವೆ.


ಕೋಟ ಶ್ರೀನಿವಾಸ್ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು(ಅ. 24)ಚುನಾವಣೆ ಫಲಿತಾಂಶ ಹೊರ ಬಿದ್ದಿದೆ.
ಕಿಶೋರ್ ಬೊಟ್ಯಾಡಿ ಅವರ ಗೆಲುವಿಗೆ, ಅವರ ಆತ್ಮೀಯರಾಗಿರುವ, ಉದ್ಯಮಿ, ಮುಂಬಯಿ ನ್ಯೂಸ್ ನ ನಿರ್ದೇಶಕ ಕುಮಾರ್ ಎನ್ ಬಂಗೇರ ಅಭಿನಂದನೆ ಸಲ್ಲಿಸಿದ್ದಾರೆ.

.



Related posts

ವೆಂಕಪ್ಪ ನಾರಾಯಣ ಶೆಟ್ಟಿ ನಿಧನ.

Mumbai News Desk

ಸುರತ್ಕಲ್ : 2 ತಂಡಗಳ ನಡುವೆ ಗಲಾಟೆ, ಇಬ್ಬರಿಗೆ ಚೂರಿ ಇರಿತ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮತ್ತು ಇತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಚ್ಚನಾಡಿ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಛತಾ ಅಭಿಯಾನ.

Mumbai News Desk

ಪಾಲ್ಘರ್ ತಾಲೂಕು ಹೋಟೆಲ್ ಓನರ್ಸ್ ಅಸೋಸಿಯೇಶನ್ ವತಿಯಿಂದ ಶ್ರೀ ರಾಮ ಪ್ರಸಾದ ವಿತರಣೆ

Mumbai News Desk

ಪಂಚರಾಜ್ಯ ವಿಧಾನಸಭಾ ಚುನಾವಣೆ 2026: ಐತಿಹಾಸಿಕ ಫಲಿತಾಂಶ ಮತ್ತು ರಾಜಕೀಯ ವಿಶ್ಲೇಷಣೆ

Mumbai News Desk

ಬೊಂಡಾಲ ಬಯಲಾಟ ಸುವರ್ಣ ಸಂಭ್ರಮ ಕರೆಯೋಲೆ ಬಿಡುಗಡೆ

Mumbai News Desk