July 23, 2026
Mumbai News Kannada
ಸುದ್ದಿ

ಪೂರ್ವ ಆಫ್ರಿಕಾದಲ್ಲಿ ಬಂಟ ಸಂಭ್ರಮ -2೦23 ಕಾರ್ಯಕ್ರಮ







ನಮ್ಮೆಲ್ಲರ ಒಗ್ಗಟ್ಟು ಸಮಾಜದ ಮೇಲಿನ ಅಭಿಮಾನ ನಿರಂತರ ಇರಬೇಕು: ಶೈಲೇಶ್ ಶೆಟ್ಟಿ

   ಆಫ್ರಿಕಾ:    ಬಂಟರ ಸಂಘ ಪೂರ್ವ ಆಫ್ರಿಕಾ ನೈರೋಬಿ ಕೀನ್ಯಾ ಇದರ ಮೊದಲನೇ ವಾರ್ಷಿಕೋತ್ಸವ ದಿನಾಂಕ 28 10.2023ನೇ ಶನಿವಾರದಂದು ಹೋಟೆಲ್ ರೆಡ್ ಜಿಂಜರ್ 2ನೇ ಪಾರ್ಕ್ ಲ್ಯಾಂಡ್ಸ್ ಅವೆನ್ಯೂ ನೈರೋಬಿ ಕೀನ್ಯಾದಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಶೈಲೇಶ್ ಶೆಟ್ಟಿಯವರು ಮಾತನಾಡುತ್ತಾ ಜಗತ್ತಿನಯಾವ ಮೂಲೆಯಲ್ಲಿ  ಸಮಾಜ ಬಾಂಧವರು ಇದ್ದರೂ ಕೂಡ .ಸಮಾಜದ ಅಭಿಮಾನ ಒಗ್ಗಟ್ಟು  ಗುರುತಿಸಿಕೊಂಡು ಬಂದವರು.  ಭಾರತವನ್ನು ಬಿಟ್ಟು ಈ ದೇಶಕ್ಕೆ ಬಂದರು ಇಲ್ಲಿ ತುಳು ನಾಡಿನ ಸಂಸ್ಕೃತಿಯನ್ನು ಆಚರಣೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು. ಒಗ್ಗಟ್ಟಿನಲ್ಲಿ ನಮ್ಮ ಸಮಾಜವನ್ನು ಬೆಳೆಸುವಲ್ಲಿ ಎಲ್ಲರೂ ಒಂದಾಗಿದ್ದೇವೆ. ನಮ್ಮೆಲ್ಲರ ಒಗ್ಗಟ್ಟು ಸಮಾಜದ ಮೇಲಿನ ಅಭಿಮಾನ ನಿರಂತರ ಇರಬೇಕು ಎಂದು ನುಡಿದರು

     ಸಂಘದ ಮಹಿಳಾ ಸದಸ್ಯೆಯರು ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂಗಳೂರು ಮೀನನಾಥ ಖ್ಯಾತಿಯ ರಾಘವೇಂದ್ರ ರೈ ಕುಂಜತ್ತೂರು ಇವರಿಂದ ಹಾಗೂ ಸಂಘದ ಸದಸ್ಯರಿಂದ ಸಂಗೀತ, ನೃತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. 

 ಅಕ್ಷಯ ರಾಜೇಶ್ ಶೆಟ್ಟಿ ಇವರ ಸನ್ಮಾನ ಪತ್ರ ವಾಚನ ದೊಂದಿಗೆ ನಟ ಹಾಗೂ ರಂಗಭೂಮಿ ಕಲಾವಿದರಾದ  ರಾಘವೇಂದ್ರ ರೈ ಅವರನ್ನು ಸನ್ಮಾನಿಸಲಾಯಿತು.

 ಕಾರ್ಯಕ್ರಮದ ಆರಂಭದಿಂದ ಕೊನೆಯವರೆಗೂ ತುಳು ಭಾಷೆಗೆ ಹೆಚ್ಚು ಪ್ರಾಧಾನ್ಯತೆ ನೀಡಿರುವುದು ವಿಶೇಷವಾಗಿತ್ತು.

 ಈ ಸಂದರ್ಭದಲ್ಲಿ *ಮೂಡಾಯಿ ಆಫ್ರಿಕಾದ ಪೆರ್ಮೆದ ಬಂಟೆರ್* ಆಲ್ಬಮ್ ಹಾಡು ಬಿಡುಗಡೆಗೊಂಡಿತು.

ಶಾಂತಿ ಯಶವಂತ್ ಶೆಟ್ಟಿ, ಶುಭ ಶೈಲೇಶ್ ಶೆಟ್ಟಿ ಪ್ರಾರ್ಥನೆಯನ್ನು ಹಾಡಿದರು, 

. ಸಂಘದ ಎಲ್ಲಾ ಸದಸ್ಯರಿಗೆ ಪ್ರಥಮ ವರ್ಷದ ಸವಿನೆನಪಿಗಾಗಿ   ಶಾಲು ಹಾಗೂ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ಸಪ್ನ ಅಶೋಕ್ ಭಂಡಾರಿ, ಗಾಯತ್ರಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸಂದೀಪ್ ಸಾಮಾನಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಅಭಿಜಿತ್ ಸೂಡ ವಂದಿಸಿದರು.                                                                                                       



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ

Mumbai News Desk

ನಟ ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ರದ್ದು, ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

Mumbai News Desk

ಪ್ರಭಾ ಸುವರ್ಣ ಅವರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿಯ ಗೌರವ…

Mumbai News Desk

ಮುಂಬೈ ಕುಲಾಲ ಸಂಘದ ಕುಲಾಲ ಭವನಕ್ಕೆ ಎಸ್. ಆರ್. ಬಂಜನ್ ಅವರಿಂದ ರೂ. 20 ಲಕ್ಷ ದೇಣಿಗೆ

Mumbai News Desk

ಪ್ರಗತಿಯ ಪಥದಲ್ಲಿ ಭಾರತ್ ಬ್ಯಾಂಕ್:  ಸೂರ್ಯಕಾಂತ್ ಜಯ ಸುವರ್ಣ 

Mumbai News Desk

ಭಾರತ್ ಬ್ಯಾಂಕ್‌ನ ಹಿರಿಯ ಸಿಬ್ಬಂದಿಗಳಾದ ಹರೀಶ್ ಕೋಟ್ಯಾನ್, ಉದಯ ಅಂಚನ್ ಅವರಿಗೆ ಗೌರವಪೂರ್ವಕ ಬೀಳ್ಕೊಡುಗೆ

Mumbai News Desk