32 C
Mumbai
March 7, 2026
Mumbai News Kannada
ಸುದ್ದಿ

ಮುಂಬೈಯ ಬಾಂದ್ರ ಟರ್ಮಿನಸ್ ನಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ





ಮುಂಬೈ, ಅಕ್ಟೋಬರ್ 27: ಮಹಾರಾಷ್ಟ್ರ ರಾಜಧಾನಿನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್​ಫಾರ್ಮ್​ ಒಂದರಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತದ ದುರ್ಭಟನೆ ಸಂಭವಿಸಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ, ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಸ್​ನ ಒಂದನೇ ಪ್ಲಾಟ್​ಫಾರ್ಮ್​ನಲ್ಲಿ ಭಾನುವಾರ ಬೆಳಗ್ಗೆ 5:56ಕ್ಕೆ ಈ ಘಟನೆ ಸಂಭವಿಸಿರುವುದು ತಿಳಿದುಬಂದಿದೆ.

ಮುಂಬೈ ಮಹಾನಗರ ಪಾಲಿಕೆ ವತಿಯಿಂದ ಬಂದ ಮಾಹಿತಿ ಪ್ರಕಾರ, ಬಾಂದ್ರಾ ಟರ್ಮಿನಸ್​ನ ಪ್ಲಾಟ್​ಫಾರ್ಮ್ 1ರಲ್ಲಿ ಬಾಂದ್ರಾ ಗೋರಖ್​ಪುರ್ ಎಕ್ಸ್​ಪ್ರೆಸ್ ರೈಲಿಗಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಕಾಯುತ್ತಿದ್ದರು. ದೀಪಾವಳಿ ಆದ ಕಾರಣ ತಂತಮ್ಮ ಊರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲ್ವೆ ಸ್ಟೇಷನ್​ನಲ್ಲಿ ಇದ್ದರು. ಟ್ರೈನ್ ಹತ್ತುವಾಗ ನೂಕುನುಗ್ಗುಲು ತೀವ್ರಗೊಂಡು ಕಾಲ್ತುಳಿತವಾಗಿದೆ. ಗಾಯಗೊಂಡ ಒಂಬತ್ತು ಮಂದಿ ಪೈಕಿ ಏಳು ಮಂದಿ ಸ್ಥಿತಿ ಚಿಂತೆ ಪಡುವಷ್ಟು ಇಲ್ಲ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಶಬೀರ್ ಅಬ್ದುಲ್ ರೆಹಮಾನ್ (40), ಪರಮೇಶ್ವರ್ ಸುಖದರ್ ಗುಪ್ತಾ (28), ರವೀಂದ್ರ ಹರಿಹರ್ ಚುಮಾ (30), ರಾಮಸೇವಕ್ ರವೀಂದ್ರ ಪ್ರಸಾದ್ ಪ್ರಜಾಪತಿ (29), ಸಂಜಯ್ ತಿಲಕ್​ರಾಮ್ ಕಂಗಯ್ (27), ದಿವ್ಯಾಂಶು ಯೋಗೇಂದ್ರ ಯಾದವ್ (18), ಮೊಹಮ್ಮದ್ ಶರೀಫ್ ಶೇಖ್ (25), ಇಂದ್ರಜಿತ್ ಸಹಾನಿ (19), ಮತ್ತು ನೂರ್ ಮೊಹಮ್ಮದ್ ಶೇಖ (18) ಎಂದು ಗುರುತಿಸಲಾಗಿದೆ.

.



Related posts

ಮಿಸೆಸ್ ಇಂಡಿಯಾ-2025 ಕಿರೀಟ ಮುಡಿಗೇರಿಸಿದ ಕನ್ನಡತಿ ಡಾ. ರಶ್ಮಾ ಎಂ. ಶೆಟ್ಟಿ

Mumbai News Desk

ಶ್ರೇಯಾ ವಿ. ಸಾಲಿಯಾನ್ ಸಿ.ಎ.ಉತ್ತೀರ್ಣ

Mumbai News Desk

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ

Mumbai News Desk

ವಿಶ್ವಕಪ್ ವಿಜೇತ ಕಬ್ಬಡ್ಡಿ ತಂಡದ ಆಟಗಾರ್ತಿ ಕು. ಧನಲಕ್ಷ್ಮಿ ಪೂಜಾರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ: 5 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭಾಭವನ ನಿರ್ಮಾಣಕ್ಕೆ ಸಹಕಾರ ರತ್ನ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಸಹಕಾರ

Mumbai News Desk

ಸಮಾಜ ಸೇವೆಯ ಕಾರ್ಯ ಸಾಧನೆಗೆ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿ.

Mumbai News Desk