July 23, 2026
Mumbai News Kannada
ಸುದ್ದಿ

ಮುಂಬೈಯ ಬಾಂದ್ರ ಟರ್ಮಿನಸ್ ನಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ







ಮುಂಬೈ, ಅಕ್ಟೋಬರ್ 27: ಮಹಾರಾಷ್ಟ್ರ ರಾಜಧಾನಿನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್​ಫಾರ್ಮ್​ ಒಂದರಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತದ ದುರ್ಭಟನೆ ಸಂಭವಿಸಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ, ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಸ್​ನ ಒಂದನೇ ಪ್ಲಾಟ್​ಫಾರ್ಮ್​ನಲ್ಲಿ ಭಾನುವಾರ ಬೆಳಗ್ಗೆ 5:56ಕ್ಕೆ ಈ ಘಟನೆ ಸಂಭವಿಸಿರುವುದು ತಿಳಿದುಬಂದಿದೆ.

ಮುಂಬೈ ಮಹಾನಗರ ಪಾಲಿಕೆ ವತಿಯಿಂದ ಬಂದ ಮಾಹಿತಿ ಪ್ರಕಾರ, ಬಾಂದ್ರಾ ಟರ್ಮಿನಸ್​ನ ಪ್ಲಾಟ್​ಫಾರ್ಮ್ 1ರಲ್ಲಿ ಬಾಂದ್ರಾ ಗೋರಖ್​ಪುರ್ ಎಕ್ಸ್​ಪ್ರೆಸ್ ರೈಲಿಗಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಕಾಯುತ್ತಿದ್ದರು. ದೀಪಾವಳಿ ಆದ ಕಾರಣ ತಂತಮ್ಮ ಊರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲ್ವೆ ಸ್ಟೇಷನ್​ನಲ್ಲಿ ಇದ್ದರು. ಟ್ರೈನ್ ಹತ್ತುವಾಗ ನೂಕುನುಗ್ಗುಲು ತೀವ್ರಗೊಂಡು ಕಾಲ್ತುಳಿತವಾಗಿದೆ. ಗಾಯಗೊಂಡ ಒಂಬತ್ತು ಮಂದಿ ಪೈಕಿ ಏಳು ಮಂದಿ ಸ್ಥಿತಿ ಚಿಂತೆ ಪಡುವಷ್ಟು ಇಲ್ಲ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಶಬೀರ್ ಅಬ್ದುಲ್ ರೆಹಮಾನ್ (40), ಪರಮೇಶ್ವರ್ ಸುಖದರ್ ಗುಪ್ತಾ (28), ರವೀಂದ್ರ ಹರಿಹರ್ ಚುಮಾ (30), ರಾಮಸೇವಕ್ ರವೀಂದ್ರ ಪ್ರಸಾದ್ ಪ್ರಜಾಪತಿ (29), ಸಂಜಯ್ ತಿಲಕ್​ರಾಮ್ ಕಂಗಯ್ (27), ದಿವ್ಯಾಂಶು ಯೋಗೇಂದ್ರ ಯಾದವ್ (18), ಮೊಹಮ್ಮದ್ ಶರೀಫ್ ಶೇಖ್ (25), ಇಂದ್ರಜಿತ್ ಸಹಾನಿ (19), ಮತ್ತು ನೂರ್ ಮೊಹಮ್ಮದ್ ಶೇಖ (18) ಎಂದು ಗುರುತಿಸಲಾಗಿದೆ.

.



Related posts

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಂಬೈಯಲ್ಲಿ ಚಿಣ್ಣರ ಬಿಂಬದ ವತಿಯಿಂದ ಪ್ರಕಾಶ ಭಂಡಾರಿ ಅವರಿಂದ ಗೌರವ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮಾಜಿ ಅಧ್ಯಕ್ಷ, ಅಪರೂಪದ ಸಾಧಕ ಹೊಸಬೆಟ್ಟು ಕೆ. ಆರ್. ಪುತ್ರನ್ ನಿಧನ

Mumbai News Desk

ಡ್ರಾಮಾ ಜ್ಯೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಸಿಎಂ ಮೆಚ್ಚುಗೆ

Mumbai News Desk

ಬಂಟರ ಸಂಘ ಮುಂಬೈಯ ನೂತನ ಟ್ರಸ್ಟಿ   ಉಳ್ತೂರು  ಮೋಹನ್ದಾಸ್ ಶೆಟ್ಟಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಭಿನಂದನೆ.

Mumbai News Desk

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ : ಮೂವರು ದರೋಡೆಕೋರರ ಬಂಧನ

Mumbai News Desk

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ : 12 ಕೋಟಿ ರೂ.ಮೌಲ್ಯದ ಚಿನ್ನ, ನಗದು ಲೂಟಿ

Mumbai News Desk