32.1 C
Mumbai
June 7, 2026
Mumbai News Kannada
ಕರಾವಳಿ

ಕೊಡೇರಿಯಲ್ಲಿ ಜರಗಿದ ಅಂಚೆ ಜನ ಸಂಪರ್ಕ ಅಭಿಯಾನ






ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಮತ್ತು ಬಿಲ್ಲವ ಸಮಾಜ ಸೇವಾ ಸಂಘ [ರಿ] ಹಕ್ರೆಮಠ, ಕೊಡೇರಿ ಇವರ ಸಹಭಾಗಿತ್ವದಲ್ಲಿ ನವೆಂಬರ್ 1 ರಂದು ಶುಕ್ರವಾರ “ಡಾಕ್-ಸೇವಾ; ಜನ್-ಸೇವಾ-ಒಂದೇ ಸೂರು-ಸೇವೆ ಹಲವಾರು” ಎಂಬ ಆಶಯದ ಅಂಚೆ-ಜನ ಸಂಪರ್ಕ ಅಭಿಯಾನವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿಯಲ್ಲಿ ನಡೆಯಿತು.

ಅಭಿಯಾನದ ನೇತೃತ್ವ ವಹಿಸಿದ್ದ ಕುಂದಾಪುರ ಉತ್ತರ ಉಪ ಅಂಚೆ-ವಿಭಾಗದ ಹೆಚ್ಚುವರಿ ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ಟರು ಮಾತನಾಡಿ, ಜನರಿಗೆ ಅನುಕೂಲವಾಗುವಂತೆ ಒಂದೇ ಸೂರಿನಡಿ ಹಲವಾರು ಅಂಚೆ-ಸೇವೆಗಳನ್ನು ನೀಡುವ ಸಲುವಾಗಿ ಇಂತಹ ಅಭಿಯಾನಗಳನ್ನು ಗ್ರಾಮ-ಗ್ರಾಮಗಳಲ್ಲಿ ಅಂಚೆ ಇಲಾಖೆಯು ನಡೆಸುತ್ತಿದ್ದು, ನೂರಾರು ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿ, ವಿವಿಧ ಅಂಚೆ ಸೇವೆಗಳ ಮಾಹಿತಿ ನೀಡಿದರು.

ಈ ಅಭಿಯಾನದ ಅಧ್ಯಕ್ಷತೆ ವಹಿಸಿದ್ದ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ನ ಸದಸ್ಯ ಮತ್ತು ಕೊಡೇರಿ ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಗೌರವ ಪ್ರಧಾನ ಕಾರ್ಯದರ್ಶಿ ಆನಂದ ಪೂಜಾರಿ ಕೊಡೇರಿ ಮಾತನಾಡುತ್ತಾ ಇಂತಹ ಜನಸ್ನೇಹಿ ಅಭಿಯಾನವನ್ನು ಆಯೋಜಿಸುತ್ತಿರುವ ಅಂಚೆ ಇಲಾಖೆಯನ್ನು ಶ್ಲಾಘಿಸಿ, ಅಭಿನಂದಿಸಿದರು. ಹಲವಾರು ಗ್ರಾಮಸ್ತರು ಆಧಾರ್-ಹೊಸ ನೋಂದಣಿ/ಪರಿಷ್ಕರಣೆ, ಆನ್-ಲೈನ್-ಅಪಘಾತ ವಿಮಾ ಸೌಲಭ್ಯ ಹಾಗು ವಿವಿಧ ಅಂಚೆ-ಸೌಲಭ್ಯಗಳ ಪ್ರಯೋಜನವನ್ನು ಪಡೆದುಕೊಂಡರು.


ಈ ಅಭಿಯಾನದಲ್ಲಿ ಅಂಚೆ ಇಲಾಖೆಯ ಕೊಡೇರಿ ಶಾಖೆಯ ಬಿಪಿಎಮ್ ರಾಜೇಶ್ವರಿ ಶಿವರಾಮ್. ಬಿಲ್ಲವ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸುಧೀರ್ ಪೂಜಾರಿ ಕಾಡ್ಕೇರಿ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು

.



Related posts

ಸಾಕ್ಷಿ ಆರ್ ಶೆಟ್ಟಿ ಶೇ.95.15 ಅಂಕ

Mumbai News Desk

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ

Mumbai News Desk

ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ,* ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ

Mumbai News Desk

ಪುರಭವನದಲ್ಲಿ  ‘ಬಣ್ಣಗಳ ಭಾವಲೋಕ’ ಶಿಷ್ಯೆ-ಪ್ರಶಿಷ್ಯೆಯರ ಸಾಧನೆಯ ಸಂಭ್ರಮ: ಡಾ.ವಸುಂಧರಾ ದೊರೆಸ್ವಾಮಿ

Mumbai News Desk

ಕಾಪು ಮೊಗವೀರ ಮಹಿಳಾ ಮಂಡಳಿಯ ರಚನೆಯ ಬಗ್ಗೆ ಪೂರ್ವಭಾವಿ ಸಭೆ ಹಾಗೂ ಸದಸ್ಯೆಯರ ಅರಸಿನ ಕುಂಕುಮ ಕಾರ್ಯಕ್ರಮ.

Mumbai News Desk

ನಟ ರಕ್ಷಿತ್ ಶೆಟ್ಟಿ : ಕಾಪು ಮಾರಿಯಮ್ಮ ದರುಶನಗೈದು, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ

Mumbai News Desk