32 C
Mumbai
March 7, 2026
Mumbai News Kannada
ಸುದ್ದಿ

ತೀಯಾ ಫ್ಯಾಮಿಲಿ ಯು.ಎ.ಇ.ಯ  ವತಿಯಿಂದ ಭಕ್ತಿ ಸಡಗರದ ದುರ್ಗಾ ಪೂಜೆ 





ದುಬಾಯಿ : ತೀಯಾ ಫ್ಯಾಮಿಲಿ ಯು.ಎ.ಇ.ಯ ಇವರ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ದುರ್ಗ ಪೂಜೆಯು ಪೂಜೆಯು ಭಕ್ತಿ ಸಡಗರದಿಂದ ಜರುಗಿತು.

      ನಗರದ ಬರ್ ದುಬೈಯ ಸಿಂಧೆ ಸೆರೊಮಣಿ ಸಭಾಂಗಣದಲ್ಲಿ ಅಕ್ಟೋಬರ್ 29 ರಂದು ಶ್ರೀ ರಘು ಭಟ್ ರವರ ಪೌರೋಹಿತ್ಯದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ಜರುಗಿತು. ಯುಎಇಯ ಎಲ್ಲಾ ರಾಜ್ಯದ ನೂರಾರು ಭಕ್ತಾದಿಗಳು,ತೀಯಾ ಸಮಾಜ ಬಾಂಧವರು ಪೂಜೆಯಲ್ಲಿ ಪಾಲ್ಗೊಂಡು ಪುನಿತರಾದರು.

   ದುರ್ಗ ಪೂಜೆಯ  ಪ್ರತಿನಿದಿಯಾಗಿ  ಸಂಸ್ಥೆಯ ಕೋಶಾಧಿಕಾರಿ ಶ್ರೀನಿವಾಸ ಕೋಟ್ಯಾನ್ ಮತ್ತು ಶ್ರೀಮತಿ ಸರೀತ ಕೋಟ್ಯಾನ್ ದಂಪತಿಗಳು ಕುಳಿತುಕೊಂಡಿದ್ದರು.

     ರಾಜರಾಜೇಶ್ವರಿ ಭಜನಾ ಮಂಡಳಿ ದುಬೈಯ ವತಿಯಿಂದ ಭಜನೆ, ತೀಯಾ ಸಮಾಜದ ಮಹಿಳೆಯರಿಂದ ಕುಣಿತ ಭಜನೆ ಮತ್ತು ಮಹಾ ಮಂಗಳಾರತಿ ನಂತರ ಅನ್ನ ಪ್ರಸಾದದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

      ತೀಯಾ ಸಮಾಜ ಯ.ಎ.ಇ.ಯ ಅಧ್ಯಕ್ಷರಾದ ರಾಜೇಶ್ ಪಳ್ಳಿಕೆರೆಯವರು ಪೂಜೆಯಲ್ಲಿ ಅತ್ಯುತ್ತಮ ಭಜನಾ ಕಾರ್ಯಕ್ರಮ ಏರ್ಪಡಿಸಿದ್ದ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರನ್ನು, ಪೂಜಾ ಮಂಟಪವನ್ನು ತಯರಿಸಿದ ದೀಪಕ್ ರಾಜ್ ,ಪುರಂದರ ಶೆಟ್ಟಿಗಾರ್  ಮತ್ತು ಮಾದ್ಯಮದ ಮಿತ್ರರನ್ನು ಅಭಿನಂದಿಸಿದ್ದರು.ಹಾಗೂ ಯು.ಎ.ಇ.ಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಮತ್ತು ಪೂಜೆಗೆ ಆಗಮಿಸಿದ ಭಕ್ತಾದಿಗಳನ್ನು ಸ್ವಾಗತಿಸಿ ಧನ್ಯವಾದವಿತ್ತರು.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ   ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್  ಗೆ ಆಹ್ವಾನ

Mumbai News Desk

ಮುಂಬೈ : ಪ್ರವೀಣ್ ಭಟ್ ಅವರಿಗೆ ಪಿತೃ ವಿಯೋಗ

Mumbai News Desk

ಮಾತೃಭೂಮಿ  ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ. ಯಿಂದ ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರಿಗೆ ಅಭಿನಂದನೆ.

Mumbai News Desk

ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರದ 15 ನೆಯ ವರ್ಧಂತ್ಯುತ್ಸವ ಸಂಪನ್ನ.

Mumbai News Desk

ಬಂಟ್ವಾಳ ವೀರ ವಿಕ್ರಮ ಜೋಡುಕರೆ ಕಂಬಳ,ಧಾರ್ಮಿಕ ಮುಖಂಡ ಡಾ. ಎಮ್ ‌ಜೆ ಪ್ರವೀಣ್ ಭಟ್ ಅವರಿಗೆ ಸನ್ಮಾನ,

Mumbai News Desk