28.4 C
Mumbai
March 7, 2026
Mumbai News Kannada
ಮುಂಬಯಿ

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಶಾಖೆಯ ಕಾರ್ಯಕಾರಿ ಸಮಿತಿಯ ಸ್ನೇಹ ಸಮ್ಮಿಲನ





ದೀಪಾವಳಿ ಹಬ್ಬದ ಪ್ರಯುಕ್ತ ಕಾರ್ಯಕಾರಿ ಸಮಿತಿವತಿಯಿಂದ ಕೌಟುಂಬಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮ :ನವಂಬರ್ 3. ರವಿವಾರ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಶಾಖೆಯ ವತಿಯಿಂದ ನವಂಬರ್ 3 ರಂದು ಕಾರ್ಯಕಾರಿ ಸಮಿತಿಯ ಕುಟುಂಬದೊಂದಿಗೆ ಸ್ನೇಹ ಸಮ್ಮಿಲನ ಕಾರ್ಯಕ್ರಮ ಫ್ರೆಂಡ್ಸ್ ಪಾರ್ಟಿ ಹಾಲ್ ನಲ್ಲಿ ಬಹು ವಿಜೃಂಭಣೆಯಿಂದ ನಡೆಯಿತು.

ಅಧ್ಯಕ್ಷರಾದ ರಾಜು ಮೊಗವೀರ ತಗ್ಗರ್ಸೆಯವರು ಸಮ್ಮಿಲನಕ್ಕೆ ಬಂದ ಸದಸ್ಯರನ್ನು ಮತ್ತು ಅವರ ಕುಟುಂಬದವರೆಲ್ಲರನ್ನು ಪುಷ್ಪ ಗೌರವನೀಡಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಡೊಂಬಿವಲಿ ಸಮಿತಿಯ ಸದಸ್ಯರಾದ ಚಂದ್ರ ನಾಯ್ಕ್ ರವರು ಸದಸ್ಯರಿಗೆ ವಿವಿಧ ರೀತಿಯ ಗೇಮ್ಸ್ ಗಳನ್ನು ಆಡಿಸುದರ ಮೂಲಕ ಸದಸ್ಯರನ್ನು ಹಾಗೂ ಅವರ ಮಕ್ಕಳನ್ನು ಹುರಿದುಂಬಿಸಿದರು. ಸದಸ್ಯರ ಮಕ್ಕಳಿಂದ ನ್ರತ್ಯ ಕಾರ್ಯಕ್ರಮ ನಡೆಯಿತು.

ಕಾರ್ಯದರ್ಶಿ ಸಂತೋಷ ಪುತ್ರನ್ ರವರು ಡೊಂಬಿವಲಿ ಸಮಿತಿಯು ನಡೆದು ಬಂದ ರೀತಿ ಮತ್ತು ಮುಂಬರುವ ಕಾರ್ಯಕ್ರಮದ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಉಪಾಧ್ಯಕ್ಷರಾದ ಬಾಬು ಮೊಗವೀರರವರು ಮಾತನಾಡುತ್ತ ಡೊಂಬಿವಲಿ ಸಮಿತಿಯು ಈ ವರುಷ ಉತ್ತಮ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಫೆಬ್ರವರಿ ತಿಂಗಳಲ್ಲಿ ಡೊಂಬಿವಲಿ – ಕಲ್ಯಾಣ ಪರಿಸರದ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ, ಮಹಿಳೆಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆ ಮತ್ತು ಮಾರ್ಚ್ ತಿಂಗಳಲ್ಲಿ *ಕುಂದರಂಜನಿ 2024* ಬಹು ವಿಜೃಂಭಣೆಯಿಂದ ಜನದಟ್ಟನೆಯಲ್ಲಿ ತುಂಬಿರುವ ಸಭಾಗ್ರಹದಲ್ಲಿ ಜರಗಿದೆ ಎಂದು ಹೇಳಲು ಸಂತೋಷವಾಗುತ್ತಿದೆ. ಜುಲೈ ತಿಂಗಳಲ್ಲಿ ಡೊಂಬಿವಲಿ – ಕಲ್ಯಾಣ ಪರಿಸರದ ಸದಸ್ಯರ ಮಕ್ಕಳಿಗಾಗಿ ಶಾಲಾ ಪರಿಕರಗಳನ್ನು ವಿತರಿಸಲಾಯಿತು.

ಅಕ್ಟೋಬರ್ ತಿಂಗಳಲ್ಲಿ ಸುಮಾರು 100 ಕ್ಕಿಂತ ಹೆಚ್ಚು ಜನರಿಗೆ ಉಚಿತ ನೇತ್ರ ತಪಾಸಣೆ ಮತ್ತು ಸುಮಾರು 35 ಮಹಿಳೆಯರಿಗೆ ಕ್ಯಾನ್ಸರ್ ತಪಾಸಣೆ ನಡೆದಿದೆ. ಇನ್ನು ಮುಂದೆಯೂ ಉತ್ತಮ ಕಾರ್ಯಕ್ರಮಗಳನ್ನು ಮಾಡಲು ನಿಮ್ಮೆಲ್ಲರ ಸಲಹೆ, ಸಹಕಾರ ಬೇಕು ಎಂದು ನುಡಿದರು. ಕೊನೆಗೆ ಊಟದ ನಂತರ ಅಧ್ಯಕ್ಷರವತಿಯಿಂದ ಸರ್ವ ಸದಸ್ಯರಿಗೂ ಸಿಹಿ ತಿಂಡಿ ಹಾಗೂ ಉಡುಗೊರೆ ವಿತರಿಸಲಾಯಿತು.

.

.



Related posts

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಖುಷಿ ರವಿ ಶೆಟ್ಟಿ ಗೆ ಶೇ 83 ಅಂಕ.

Mumbai News Desk

ಶ್ರೀ ಮಹಾ ವಿಷ್ಣು ಮಂದಿರ ಡೊಂಬಿವಲಿ: ಮಹಿಳಾ ವಿಭಾಗದ ವತಿಯಿಂದ ಸಂಭ್ರಮದ ‘ಅರಿಶಿನ-ಕುಂಕುಮ’ ಕಾರ್ಯಕ್ರಮ

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ 60ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಮತ್ತು ವಾರ್ಷಿಕ ಮಹಾಸಭೆ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶರಣ್ಯ ಪೈ ಶೇ 83.2 ಅಂಕ.

Mumbai News Desk

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ನಲ್ಲಿ ಭಕ್ತಿ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ

Mumbai News Desk

ಕಲಾತಂತ್ರ ಪ್ರೊಡಕ್ಷನ್ ಲೋಕಾರ್ಪಣೆ : ಜು. 28ರಂದು ‘ತುಡರ್’ ತುಳು ಚಿತ್ರ ಬಿಡುಗಡೆ.

Mumbai News Desk