28.4 C
Mumbai
March 7, 2026
Mumbai News Kannada
ಸುದ್ದಿ

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ





ಮಂಗಳೂರು ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ವತಿಯಿಂದ 6 ನವೆಂಬರ್ 2024 ರಂದು ಮಣಿಪಾಲ್ ಶಾಲೆ, ಅತ್ತಾವರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಕೃತಕ ಬುದ್ಧಿಮತ್ತೆ (AI) ಉದ್ಯೋಗಾವಕಾಶಗಳ ಕುರಿತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಕ್ರತಕ ಬುದ್ದಿಮತ್ತೆ (AI ) ವೃತ್ತಿಯಲ್ಲಿ ಅಗತ್ಯವಿರುವ ಕೌಶಲ್ಯಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮೆಲುಕು ಹಾಕುವ ತಂತ್ರಗಳ ಕುರಿತು ಮಾಹಿತಿಯನ್ನು ನೀಡಲಾಯಿತು. ಇಂಟರಾಕ್ಟಿವ್ ಅಧಿವೇಶನಗಳ ಮೂಲಕ, ವಿದ್ಯಾರ್ಥಿಗಳು AI ಕ್ಷೇತ್ರದ ಅಭಿವೃದ್ಧಿ ಮತ್ತು ಅದರ ಉದ್ಯೋಗಾವಕಾಶಗಳ ಕುರಿತು ಅಮೂಲ್ಯ ಮಾರ್ಗದರ್ಶನವನ್ನು ಪಡೆದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಯಾದ ಅಕ್ಷತ ಕದ್ರಿ, ಲಕ್ಷ್ಮೀಶ ಪಿ ಕೋಟ್ಯಾನ್ ಮತ್ತು ಪ್ರಥಮ್ ರಾವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಅಧ್ಯಾಪಕರು ಭಾಗಿಯಾಗಿದ್ದು, ಶಿಬಿರ ಯಶಸ್ವಿಯಾಗಿ ನಡೆಯಿತು ಎಂದು ಟ್ರಸ್ಟಿನ ಅಧ್ಯಕ್ಷರಾದ ಪ್ರಕಾಶ್ ಮೂಲತ್ವ ತಿಳಿಸಿದ್ದಾರೆ.



Related posts

ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ – ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಅರ್ಜಿ ಸಲ್ಲಿಸುವುದು ಹೇಗೆ?

Mumbai News Desk

ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಉಡುಪಿ: ಕರ್ನಾಟಕದ ಮೊಟ್ಟಮೊದಲ ‘ಸಂಪೂರ್ಣ ಸಾಕ್ಷರ’ ಜಿಲ್ಲೆಯಾಗಿ ಉಡುಪಿ

Mumbai News Desk

ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ಮಾತೃಶ್ರೀ ಲೀಲಾವತಿ ಶೆಟ್ಟಿ ನಿಧನ,

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ನ ಪ್ರಶಸ್ತಿ ಸ್ವೀಕರಿಸಿದ ಫೂಲ್‌ಬಸನ್ ಬಾಯಿ ಯಾದವ್ ಆಶಯ : ಅಹಂ, ಆಸೆಯಿಂದ ಕೇಡು; ಕರ್ಮ ಒಳಿತಿನ ಬೀಡು

Mumbai News Desk

ಪತ್ರಕರ್ತ ಗೋಪಾಲ ಅಂಚನ್ ಚಿಕಿತ್ಸೆಗೆ ಒಮಾನ್ ಬಿಲ್ಲವಾಸ್ ಸಂಘಟನೆಯಿಂದ ಆರ್ಥಿಕ ನೆರವು..

Mumbai News Desk

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

Mumbai News Desk