30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ ಇಲ್ಲಿ ನವೆಂಬರ್ 13 ರಂದುತುಳಸೀ ಪೂಜೆ ಹಾಗೂ ಕಾರ್ತಿಕ ದೀಪೋತ್ಸವ





ಬೊಯಿಸರ್ : ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಪರಿಸರದಲ್ಲಿ ಆಧ್ಯಾತ್ಮಿಕ ಅನುಭೂತಿಯನ್ನುಂಟು ಮಾಡುತ್ತಾ ಪಾಲ್ಘರ್ ಜಿಲ್ಲೆಯಲ್ಲಿನ ತುಳು ಕನ್ನಡಿಗರ ಸಾಂಸ್ಕೃತಿಕ ಶೃದ್ಧಾ ಕೇಂದ್ರವೆನಿಸಿದ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಇದೇ ಬರುವ ತಾ 13 ನೆಯ ನವೆಂಬರ್ ಬುಧವಾರದಂದು ಸಂಜೆ 5ಕ್ಕೆ ಮಂದಿರದ ಆವರಣದಲ್ಲಿ ತುಳಸೀ ವಿವಾಹ ಪೂಜಾ ಕಾರ್ಯಕ್ರಮ ಮತ್ತು ಕಾರ್ತಿಕ ವಿಶೇಷ ದೀಪೋತ್ಸವವನ್ನು ಭಕ್ತಾದಿಗಳಿಂದ ಆಚರಿಸಲಾಗುವುದು.
ಕಾರ್ತಿಕ ಮಾಸದಲ್ಲಿ ತಮ್ಮ ಮನೆಯಂಗಳ , ದ್ವಾರದಲ್ಲಿನ ಜೊತೆಗೆ ಮಂದಿರಗಳಲ್ಲಿ ಎಣ್ಣೆ ದೀಪ ಹಚ್ಚುವುದರಿಂದ ವಿಶೇಷ ದೈವಾನುಗ್ರಹ ಪ್ರಾಪ್ತಿಯಾಗುವುದು ಎಂಬ ನಂಬಿಕೆ ಇದೆ.
ಸದ್ಗುರು ಶ್ರೀ ಸ್ವಾಮಿ ನಿತ್ಯಾನಂದ
ಬಾಬಾ ಇವರ ದಿವ್ಯ ಕೃಪೆಯಿಂದ ಜರಗುವ ಈ ಕಾರ್ಯಕ್ರಮದಲ್ಲಿ ಭಕ್ತಾಭಿಮಾನಿಗಳೆಲ್ಲರೂ ಕುಟುಂಬ ಸಮೇತ ಬಂದು ಭಾಗವಹಿಸ ಬೇಕಾಗಿ ಶ್ರೀ ನಿತ್ಯಾನಂದ ಸ್ವಾಮಿ ಭಕ್ತ ವೃಂದದ ಸರ್ವಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.
ಸುದ್ದಿ : ಪಿ.ಆರ್.ರವಿಶಂಕರ್

.

.

.

.

.



Related posts

ಮೊಗವೀರ ಪ್ರೀಮಿಯರ್ ಲೀಗ್ (ಎಂಪಿಎಲ್) ಕ್ರಿಕೆಟ್ ಟೂರ್ನಮೆಂಟ್ – 2026ಕ್ಕೆ ಆಹ್ವಾನ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಿಲಿ : ನಾಳೆ( ಅ. 15)   ಶಿಯಳಾಭಿಷೇಕ ಸೇವೆ

Mumbai News Desk

ಮಾರ್ಚ್ 1ರಂದು ಗೋರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಸಮಾರಂಭ : ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಜು. 13ಕ್ಕೆ ಮಕ್ಕಳ ವಾರ್ಷಿಕ ಶಾಲಾ ಶುಲ್ಕ ವಿತರಣಾ ಕಾರ್ಯಕ್ರಮ

Mumbai News Desk

ಆದಿ ಕಿಲ್ಲಾಡಿ ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಕಿಲ್ಪಾಡಿ, ಮೂಲ್ಕಿ : ಫೆ. 7ಕ್ಕೆ. ಸಿರಿಸಿಂಗಾರದ ನೇಮೋತ್ಸವ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆ. 11 ರಿಂದ 15 ರವರೆಗೆ ಕುಂಭ ಮಹೋತ್ಸವ

Mumbai News Desk