30.5 C
Mumbai
June 8, 2026
Mumbai News Kannada
ಪ್ರಕಟಣೆ

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ‘ಕರ್ನಾಟಕ ರಾಜ್ಯೋತ್ಸವ’ ಆಚರಣೆ






ಕರ್ನಾಟಕ ಸಂಘ, ಕಲ್ಯಾಣ ಸ್ಥಾಪನೆಯಾಗಿ 21 ವರ್ಷಗಳಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಘದ ವಾರ್ಷಿಕ ಕಾರ್ಯಕ್ರಮವಾಗಿ ವಿಜ್ರಂಭಣೆಯಿಂದ ಆಚರಿಸುತ್ತಿದ್ದು ಈ ವರ್ಷ 16 ನವೆಂಬರ್ ದಂದು ಸಂಜೆ 5ರಿಂದ ಕಲ್ಯಾಣ ಪಶ್ಚಿಮದ ಗಿರಿಜಾ ಪಯ್ಯಾಡೆ ಸಭಾಗ್ರಹದಲ್ಲಿ ಆಚರಿಸಲಾಗುವುದು. ಆ ಪ್ರಯುಕ್ತ ಘನ್ಸೋಲಿ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಶ್ರೀ ಅಣ್ಣಿ ಸಿ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಹಾಗೂ ನವಿ ಮುಂಬಯಿ ಕನ್ನಡ ಸಂಘದ ಚೇರ್ಮನ್ ಶ್ರೀ ಬಿ.ಎಚ್.ಕಟ್ಟಿಯವರು ಗೌರವ ಅತಿಥಿಗಳಾಗಿ ಆಗಮಿಲಿದ್ದಾರೆ. ಈ ಸಂದರ್ಭದಲ್ಲಿ ಸಮಾಜ ಸೇವಕ ಇಂಜಿನಿಯರ್ ಶ್ರೀ ಸತೀಶ್ ಅಲಗೂರ್ ಹಾಗೂ ಉದ್ಯಮಿ ಶ್ರೀ ಹರೀಶ್ ಪ್ರಭುರವರನ್ನು ಸನ್ಮಾನಿಸಲಾಗುವುದು. ರಾಜ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ 10 ನವೆಂಬರ್ ದಂದು ಸಂಜೆ 3ರಿಂದ ವಿವಿಧ ಸ್ಪರ್ಧೆಗಳನ್ನು ಸಂಘದ ಕಾರ್ಯಲಯದಲ್ಲಿ ಏರ್ಪಡಿಸಲಾಯಿತು. ನವೆಂಬರ್ 16ರ ರಾಜ್ಯೋತ್ಸವ ಕಾರ್ಯಕ್ರಮವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭವಾಗಲಿದ್ದು ಸಭಾ ಕಾರ್ಯಕ್ರಮಗಳ ಜೊತೆಗೆ ಸಂಘದ “ಸ್ಮರಣ ಸಂಚಿಕೆ 2024″ಯನ್ನು ಬಿಡುಗಡೆ ಮಾಡಲಾಗುವುದು. ಕಲ್ಯಾಣ ಪರಿಸರದ ಹಾಗೂ ಎಲ್ಲಾ ಕನ್ನಡ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೆಂದು ಕಾರ್ಯಕ್ರಮ ಕಮಿಟಿ ಚೇರ್ಮನ್, ಶ್ರೀ ಭಾಸ್ಕರ ಶೆಟ್ಟಿಯವರು ಹಾಗೂ ಸಂಘದ ಅಧ್ಯಕ್ಷ ಶ್ರೀ ಕೆ.ಎನ್.ಸತೀಶರು ವಿನಂತಿಸಿಕೊಂಡಿದ್ದಾರೆ.

.

.

.



Related posts

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ – ಸೆ. 29 ರಂದು 36ನೇ ವಾರ್ಷಿಕ ಮಹಾಸಭೆ

Mumbai News Desk

ತುಳು ಸಂಘ ಬೊರಿವಲಿ  ಸೆ. 19 ರಂದು  15ನೇ  ವಾರ್ಷಿಕ ಮಹಾಸಭೆ

Mumbai News Desk

ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ನಾಯ್ಗಾಂವ್ – ವಿರಾರ್ ಶಾಖೆಜು. 28ಕ್ಕೆ “ಪ್ರಸ್ತುತ ಶಿಕ್ಷಣ ವ್ಯವಸ್ಥೆ” ಬಗ್ಗೆ ವಿಚಾರ ಸಂಕಿರಣ

Mumbai News Desk

ಕಲಾಜಗತ್ತಿನ ಆಯೋಜನೆಯಲ್ಲಿ ವಿಶಿಷ್ಟ ಪರಿಕಲ್ಪನೆಯೊಂದಿಗೆ ಮೂಡಿಬಂದು ಜನರನ್ನು ರಂಜಿಸಲಿರುವ “ಬೊಂಬಾಯಿಡ್ ತುಳುನಾಡ್ ” ತುಳು ಉತ್ಸವ

Mumbai News Desk

ಶ್ರೀ ಗುರುದೇವ ನಿತ್ಯಾನಂದ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನ ಸಾಕಿನಾಕ. ಡಿ.21 ರಿಂದ 24ರ ತನಕ ಪುನರ್ ಪ್ರತಿಷ್ಟೆ..

Mumbai News Desk