September 6, 2026
Mumbai News Kannada
ಪ್ರಕಟಣೆ

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ‘ಕರ್ನಾಟಕ ರಾಜ್ಯೋತ್ಸವ’ ಆಚರಣೆ






ಕರ್ನಾಟಕ ಸಂಘ, ಕಲ್ಯಾಣ ಸ್ಥಾಪನೆಯಾಗಿ 21 ವರ್ಷಗಳಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಘದ ವಾರ್ಷಿಕ ಕಾರ್ಯಕ್ರಮವಾಗಿ ವಿಜ್ರಂಭಣೆಯಿಂದ ಆಚರಿಸುತ್ತಿದ್ದು ಈ ವರ್ಷ 16 ನವೆಂಬರ್ ದಂದು ಸಂಜೆ 5ರಿಂದ ಕಲ್ಯಾಣ ಪಶ್ಚಿಮದ ಗಿರಿಜಾ ಪಯ್ಯಾಡೆ ಸಭಾಗ್ರಹದಲ್ಲಿ ಆಚರಿಸಲಾಗುವುದು. ಆ ಪ್ರಯುಕ್ತ ಘನ್ಸೋಲಿ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಶ್ರೀ ಅಣ್ಣಿ ಸಿ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಹಾಗೂ ನವಿ ಮುಂಬಯಿ ಕನ್ನಡ ಸಂಘದ ಚೇರ್ಮನ್ ಶ್ರೀ ಬಿ.ಎಚ್.ಕಟ್ಟಿಯವರು ಗೌರವ ಅತಿಥಿಗಳಾಗಿ ಆಗಮಿಲಿದ್ದಾರೆ. ಈ ಸಂದರ್ಭದಲ್ಲಿ ಸಮಾಜ ಸೇವಕ ಇಂಜಿನಿಯರ್ ಶ್ರೀ ಸತೀಶ್ ಅಲಗೂರ್ ಹಾಗೂ ಉದ್ಯಮಿ ಶ್ರೀ ಹರೀಶ್ ಪ್ರಭುರವರನ್ನು ಸನ್ಮಾನಿಸಲಾಗುವುದು. ರಾಜ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ 10 ನವೆಂಬರ್ ದಂದು ಸಂಜೆ 3ರಿಂದ ವಿವಿಧ ಸ್ಪರ್ಧೆಗಳನ್ನು ಸಂಘದ ಕಾರ್ಯಲಯದಲ್ಲಿ ಏರ್ಪಡಿಸಲಾಯಿತು. ನವೆಂಬರ್ 16ರ ರಾಜ್ಯೋತ್ಸವ ಕಾರ್ಯಕ್ರಮವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭವಾಗಲಿದ್ದು ಸಭಾ ಕಾರ್ಯಕ್ರಮಗಳ ಜೊತೆಗೆ ಸಂಘದ “ಸ್ಮರಣ ಸಂಚಿಕೆ 2024″ಯನ್ನು ಬಿಡುಗಡೆ ಮಾಡಲಾಗುವುದು. ಕಲ್ಯಾಣ ಪರಿಸರದ ಹಾಗೂ ಎಲ್ಲಾ ಕನ್ನಡ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೆಂದು ಕಾರ್ಯಕ್ರಮ ಕಮಿಟಿ ಚೇರ್ಮನ್, ಶ್ರೀ ಭಾಸ್ಕರ ಶೆಟ್ಟಿಯವರು ಹಾಗೂ ಸಂಘದ ಅಧ್ಯಕ್ಷ ಶ್ರೀ ಕೆ.ಎನ್.ಸತೀಶರು ವಿನಂತಿಸಿಕೊಂಡಿದ್ದಾರೆ.

.

.

.



Related posts

ಪೌರಾಣಿಕ ವಾಚಕ ಸಮಿತಿ ಮುಂಬಯಿ : ಫೆ. 28ಕ್ಕೆ 50ನೇ ವಾರ್ಷಿಕ ಶನಿ ಮಹಾಪೂಜೆ, ಮಾ.1ರಂದು ಸುವರ್ಣ ಮಹೋತ್ಸವ ಆಚರಣೆ

Mumbai News Desk

ಇಂದು ಕಾಪು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಅವರ ಸಂಸ್ಕರಣೆ

Mumbai News Desk

ಮೊಗವೀರ ಮಹಾಜನ ಸೇವಾ ಬಗ್ವಾಡಿ ಹೋಬಳಿ , ಮುಂಬೈ : ಆ.22ರಂದು ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ವೈಭವ

Mumbai News Desk

ಮಲಾಡ್ ಕನ್ನಡ ಸಂಘದ ಆಶ್ರಯದಲ್ಲಿ ಡಿ. 29 ರಂದು ಸದಸ್ಯ ಬಾಂಧವರಿಗೆ ಮತ್ತು ಮಕ್ಕಳಿಗಾಗಿ ಒಳಾಂಗಣ ಕ್ರೀಡಾಕೂಟ

Mumbai News Desk

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,

Mumbai News Desk

ಫೆ. 19 ರಂದು ಡೊಂಬಿವಲಿ ಶ್ರೀಮಹಾವಿಷ್ಣು ಮಂದಿರದಲ್ಲಿ “ದಶಾವತಾರ “ಹರಿನಾಮವಳಿ – ಶುಭ ಚಿಂತನ

Mumbai News Desk