July 23, 2026
Mumbai News Kannada
ತುಳುನಾಡು

ಹೆಜಮಾಡಿ ಬಿಲ್ಲವ ಸಂಘದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ







ಹೆಜಮಾಡಿ ಬಿಲ್ಲವ ಸಂಘ (ರಿ ) ಹೆಜಮಾಡಿ,ಗಾಂಧಿನಗರ ಯುವಕ ಯುವತಿ ವ್ರoದ (ರಿ ) ಹೆಜಮಾಡಿ ಕೋಡಿ, ಕೆ. ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ, ಎ. ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ದೇರಳಕಟ್ಟೆ,ನಿಟ್ಟೆ ಮೀನಾಕ್ಷಿ ಹೆಗ್ಡೆ ಆರೋಗ್ಯ ಕೇಂದ್ರ ಹೆಜಮಾಡಿ ಕೋಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರವು ಹೆಜಮಾಡಿ ಬಿಲ್ಲವ ಸಂಘದಲ್ಲಿ ಜರಗಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ವಹಿಸಿದ್ದರು.
ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಶ್ವರ ದಯಾನಂದ ಹೆಜಮಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಉದ್ಯಮಿ ಅರುಣ್ ಕೊಪ್ಪಲ, ಗಾಂಧಿ ನಗರ ಯುವಕ ವ್ರoದದ ಅಧ್ಯಕ್ಷ ಚಂದ್ರಶೇಖರ ಸುವರ್ಣ, , ಹೆಜಮಾಡಿ ಯ ಧಾರ್ಮಿಕ ಮುಖಂಡ ಮಾಧವ ಸನಿಲ್, ಹೆಜಮಾಡಿ ಗ್ರಾ. ಪಂಚಾಯತ್ ಉಪಾಧ್ಯಕ್ಷ ಮೋಹನ್ ಸುವರ್ಣ, ವಿವಿಧ ವಿಭಾಗದ ವೈದ್ಯರು ಗಳಾದ ಡಾI ರಾಘವೇಂದ್ರ, ಡಾ. ರೋಹಿತ್ ಹೊಳ್ಳ, ಡಾ. ಗುರುಸಂದೇಶ್, ಡಾ. ಸೋನಿತ್, ಡಾ.ರಕ್ಷಿತ್, ಡಾ. ವೈಷ್ಣವಿ , ಇವರುಗಳು ಉಪಸ್ಥಿತರಿದ್ದರು.

ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಪ್ರಭೋದ್ ಚಂದ್ರ ಹೆಜಮಾಡಿ ವಂದಿಸಿದರು, ಮನೋಹರ್ ಹೆಜಮಾಡಿ ಕಾರ್ಯಕ್ರಮ ನಿರೂಪಿಸಿದರು

ಈ ಶಿಬಿರದಲ್ಲಿ ಕಿವಿ ಮೂಗು ಗಂಟಲು, ಕಣ್ಣು, ಚರ್ಮರೋಗ, ಎಲುಬು ಕೀಲು, ಸ್ತ್ರೀ ರೋಗ, ದಂತ ಪರೀಕ್ಷೆ ಮತ್ತು ಚಿಕಿತ್ಸಾ ವಿಭಾಗಗಳಲ್ಲಿ ನುರಿತ ವೈದ್ಯರು ಪರೀಕ್ಷೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿ ಔಷದಿಯನ್ನು ಉಚಿತ ವಾಗಿ ವಿತರಿಸಲಾಯಿತು ಹಾಗೂ ಅಗತ್ಯ ಇರುವವರಿಗೆ ಉಚಿತ ಕನ್ನಡಕ ವಿತರಿಸಲಾಯಿತು. ಹೆಜಮಾಡಿ ಸುತ್ತಮುತ್ತಲಿನ ಸುಮಾರು 500 ಕ್ಕೂ ಮಿಕ್ಕಿ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದರು.



Related posts

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಮುಲ್ಕಿ ಸೀಮೆಯ ಅರಸು ಕಂಬಳಕ್ಕೆ ಚಾಲನೆ. ಕಂಬಳ ತುಳುನಾಡಿನ ಸಂಸ್ಕೃತಿಯ ಪ್ರತೀಕ:ಐಕಳ ಹರೀಶ್ ಶೆಟ್ಟಿ

Mumbai News Desk

ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಉಚಿತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ  ಕ್ರಿಕೆಟ್ ಪಂದ್ಯಾಕೂಟ : ಶಾಲೆಗೆ ರೂಪಾಯಿ 1,67,875/ ಹಸ್ತಾಂತರ.

Mumbai News Desk

ಹೆಜಮಾಡಿ ಕೋಡಿಕರೆ ಬಿಲ್ಲವರ ಸಮಿತಿ – ವಿದ್ಯಾರ್ಥಿವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

ಸಾಲಿಯಾನ್ ಆದಿ ಮೂಲಸ್ಥಾನ ಪಲಿಮಾರು : ವಾರ್ಷಿಕ ನಾಗದರ್ಶನ ಹಾಗೂ ದೈವದ ತಂಬಿಲ ಸೇವೆ ಸಂಪನ್ನ

Mumbai News Desk

ರಾಮನ ಸೇವೆಯೇ ರಾಷ್ಟ್ರಸೇವೆ: ಒಡಿಯೂರು ಶ್ರೀ

Mumbai News Desk