30.5 C
Mumbai
June 8, 2026
Mumbai News Kannada
ತುಳುನಾಡು

ಹೆಜಮಾಡಿ ಬಿಲ್ಲವ ಸಂಘದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ





ಹೆಜಮಾಡಿ ಬಿಲ್ಲವ ಸಂಘ (ರಿ ) ಹೆಜಮಾಡಿ,ಗಾಂಧಿನಗರ ಯುವಕ ಯುವತಿ ವ್ರoದ (ರಿ ) ಹೆಜಮಾಡಿ ಕೋಡಿ, ಕೆ. ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ, ಎ. ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ದೇರಳಕಟ್ಟೆ,ನಿಟ್ಟೆ ಮೀನಾಕ್ಷಿ ಹೆಗ್ಡೆ ಆರೋಗ್ಯ ಕೇಂದ್ರ ಹೆಜಮಾಡಿ ಕೋಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರವು ಹೆಜಮಾಡಿ ಬಿಲ್ಲವ ಸಂಘದಲ್ಲಿ ಜರಗಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ವಹಿಸಿದ್ದರು.
ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಶ್ವರ ದಯಾನಂದ ಹೆಜಮಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಉದ್ಯಮಿ ಅರುಣ್ ಕೊಪ್ಪಲ, ಗಾಂಧಿ ನಗರ ಯುವಕ ವ್ರoದದ ಅಧ್ಯಕ್ಷ ಚಂದ್ರಶೇಖರ ಸುವರ್ಣ, , ಹೆಜಮಾಡಿ ಯ ಧಾರ್ಮಿಕ ಮುಖಂಡ ಮಾಧವ ಸನಿಲ್, ಹೆಜಮಾಡಿ ಗ್ರಾ. ಪಂಚಾಯತ್ ಉಪಾಧ್ಯಕ್ಷ ಮೋಹನ್ ಸುವರ್ಣ, ವಿವಿಧ ವಿಭಾಗದ ವೈದ್ಯರು ಗಳಾದ ಡಾI ರಾಘವೇಂದ್ರ, ಡಾ. ರೋಹಿತ್ ಹೊಳ್ಳ, ಡಾ. ಗುರುಸಂದೇಶ್, ಡಾ. ಸೋನಿತ್, ಡಾ.ರಕ್ಷಿತ್, ಡಾ. ವೈಷ್ಣವಿ , ಇವರುಗಳು ಉಪಸ್ಥಿತರಿದ್ದರು.

ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಪ್ರಭೋದ್ ಚಂದ್ರ ಹೆಜಮಾಡಿ ವಂದಿಸಿದರು, ಮನೋಹರ್ ಹೆಜಮಾಡಿ ಕಾರ್ಯಕ್ರಮ ನಿರೂಪಿಸಿದರು

ಈ ಶಿಬಿರದಲ್ಲಿ ಕಿವಿ ಮೂಗು ಗಂಟಲು, ಕಣ್ಣು, ಚರ್ಮರೋಗ, ಎಲುಬು ಕೀಲು, ಸ್ತ್ರೀ ರೋಗ, ದಂತ ಪರೀಕ್ಷೆ ಮತ್ತು ಚಿಕಿತ್ಸಾ ವಿಭಾಗಗಳಲ್ಲಿ ನುರಿತ ವೈದ್ಯರು ಪರೀಕ್ಷೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿ ಔಷದಿಯನ್ನು ಉಚಿತ ವಾಗಿ ವಿತರಿಸಲಾಯಿತು ಹಾಗೂ ಅಗತ್ಯ ಇರುವವರಿಗೆ ಉಚಿತ ಕನ್ನಡಕ ವಿತರಿಸಲಾಯಿತು. ಹೆಜಮಾಡಿ ಸುತ್ತಮುತ್ತಲಿನ ಸುಮಾರು 500 ಕ್ಕೂ ಮಿಕ್ಕಿ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದರು.



Related posts

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಮಂಗಳ ಪ್ರಶ್ನೆಗೆ ಚಾಲನೆ

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೆತ್ತವರು ಮತ್ತು ಮಕ್ಕಳಿಗೆ ಉಪಯುಕ್ತ ಮಾಹಿತಿ ಇರುವ ಕೈ ಪಿಡಿ ಬಿಡುಗಡೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರಿಗೆ  ಗೌರವ.

Mumbai News Desk

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬಲಿ ಉತ್ಸವ ಸಂಪನ್ನ

Mumbai News Desk

ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ, ಸಮಾಜಿಕ ಕಾರ್ಯಕರ್ತ ಜನಾರ್ಧನ ಬಂಗೇರ ಅವರಿಗೆ ಸನ್ಮಾನ

Mumbai News Desk

ಮೂಲ್ಕಿಯಲ್ಲಿ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2026: ಕಲಾವಿದರ ಪಾಲ್ಗೊಳ್ಳುವಿಕೆ ಮುಖ್ಯ – ಗುರುಕಿರಣ್

Mumbai News Desk