32 C
Mumbai
April 24, 2026
Mumbai News Kannada
ಪ್ರಕಟಣೆ

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ – ಡಿ. 1ರಂದು ವಾರ್ಷಿಕ ಕ್ರೀಡಾಕೂಟ.





ಮುಂಬಯಿಯ ಪ್ರತಿಷ್ಟಿತ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ ಇದರ 82ನೇ ವಾರ್ಷಿಕ ಕ್ರೀಡಾಕೂಟವು ಡಿಸೆಂಬರ್ 1ರ ಆದಿತ್ಯವಾರ, ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ರ ತನಕ, ಚರ್ಚ್ ಗೇಟ್ ಬಳಿಯ ಕರ್ನಾಟಕ ಸ್ಪೋರ್ಟಿಂಗ್ ಎಸೋಸಿಯೇಶನ್ ಮೈದಾನದಲ್ಲಿ ಜರಗಲಿದೆ.
ಸಂಘದ ಗೌರವ ಅಧ್ಯಕ್ಷ ಸುರೇಶ್ ಆರ್ ಕಾಂಚನ್ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಲಿರುವರು.
ಗೌರವ ಅತಿಥಿಗಳಾಗಿ ಸಮಾಜದ ಗಣ್ಯರುಗಳಾದ ಗೋಪಾಲ ಪುತ್ರನ್, ಮಹಾಬಲ ಕುಂದರ್, ರಮೇಶ್ ಬಂಗೇರ, ಸಂತೋಷ ಪುತ್ರನ್, ಕಿಶೋರ್ ಬಂಗೇರ, ರತ್ನಾಕರ ಚಂದನ್, ಪ್ರದೀಪ್ ಚಂದನ್, ಸಿ. ಕೆ. ನಾಯ್ಕ್ ಮತ್ತು ಉದಯ ಕೋಟೇಶ್ವರ ಪಾಲ್ಗೊಳ್ಳರಿರುವರು.
ಕ್ರೀಡಾಕೂಟದಲ್ಲಿ 5 ರಿಂದ 60 ವರ್ಷದೊಳಗಿನ ಸಮಾಜ ಬಾಂದವರು ಅವರ ವಯೋಮಿತಿಗನುಗುಣವಾಗಿ ಕ್ರೀಡೆಗಳಲ್ಲಿ ಭಾಗವಹಿಸ ಬಹುದು.
ಪಶ್ಚಿಮ ಮತ್ತು ಮದ್ಯ ವಲಯದ ಪುರುಷ/ಮಹಿಳೆಯರ ಹಗ್ಗ ಜಗ್ಗಾಟ ಕ್ರೀಡಾಕೂಟದ ವಿಶೇಷ ಆಕರ್ಷಣೆಯಾಗಲಿದೆ.
ದಿನವಿಡೀ ನಡೆಯುವ ಕ್ರೀಡಾಕೂಟದಲ್ಲಿ ಸಮಾಜ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕ್ರೀಡೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ವಾರ್ಷಿಕ ಕ್ರೀಡೋತ್ಸವವನ್ನು ಯಶಸ್ವಿಯಾಗಿ ನಡೆಸಲು ಸಹಕಾರ ನೀಡುವಂತೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿಯ ಅಧ್ಯಕ್ಷ ರಾಜು ಮೆಂಡನ್ ವಂಡ್ಸೆ, ಗೌರವ ಕಾರ್ಯದರ್ಶಿ ಗಣೇಶ್ ಮೆಂಡನ್, ಗೌರವ ಕೋಶಾಧಿಕಾರಿ ಸತೀಶ್ ಶ್ರೀಯಾನ್, ಕ್ರೀಡಾ ಕಾರ್ಯದರ್ಶಿಗಳಾದ ಅಶೋಕ್ ಮೆಂಡನ್, ಉಮೇಶ್ ಮೊಗವೀರ ಮತ್ತು ಕೇಂದ್ರ ಕಛೇರಿಯ ಆಡಳಿತ ಮಂಡಳಿಯ ಸದಸ್ಯರು ವಿನಂತಿಸಿದ್ದಾರೆ.



Related posts

ಡಿ.17 ರಿಂದ 21 ರ ವರಗೆ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ.

Mumbai News Desk

ತುಳು ಸಂಘ ಬೊರಿವಲಿ  ಸೆ. 19 ರಂದು  15ನೇ  ವಾರ್ಷಿಕ ಮಹಾಸಭೆ

Mumbai News Desk

ಬೊರಿವಿಲಿ ಶ್ರೀ ಮಹೀಷಮರ್ದಿನಿ ದೇವಸ್ಥಾನ ದಲ್ಲಿ ಶ್ರೀ ರಾಮ ಪ್ರತಿಷ್ಠಾ ಮಹೋತ್ಸವ

Mumbai News Desk

ಕನ್ನಡ ಸಂಘ ಸಯನ್ : ಮಾ. 29ರಂದು ಬೃಹತ್ ಉದ್ಯೋಗ ಮೇಳ

Mumbai News Desk

ಅ. 5ಕ್ಕೆ : ಮೊಗವೀರ ವ್ಯವಸ್ಥಾಪಕ ಮಂಡಳಿ ಮತ್ತು ವಸಯಿ ತಾಲೂಕ ಮೊಗವೀರ ಸಂಘದಿಂದ, ವಸಯಿಯಲ್ಲಿ ಉಚಿತ ಡಯಾಲಿಸಿಸ್ ಸೇವೆಗೆ ಚಾಲನೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 21ಕ್ಕೆ ಗುರುಪೂರ್ಣಿಮ ಮಹೋತ್ಸವ.

Mumbai News Desk