July 23, 2026
Mumbai News Kannada
ಸುದ್ದಿ

ತೊಕ್ಕೊಟ್ಟು ಸಾಯಿ ಪರಿವಾರ್ ನ ಆಹಾರ ಸಾಮಗ್ರಿ‌ ಕಿಟ್ ಸ್ವೀಕರಿಸಿದ ನಿಜವಾದ ಅಶಕ್ತ ಬಂದುಗಳು, ಧನ್ಯತಾ ಭಾವ, ಸಾಯಿ ಸೇವೆಗೆ ಕೃತಜ್ಞತೆ. ತೆನೆಗೆ ಹಾಲೆರೆದು ಉದ್ಘಾಟಿಸಿದ ಜೀವ ರಕ್ಷಕ ಈಶ್ವರ್ ಮಲ್ಪೆ







ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಕಾರ್ಯಕ್ರಮ ಸಾಯಿ ಪರಿವಾರ್ ಸೇವಕರು ಗುರುತಿಸಿದ 200 ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಣಾ ಕಾರ್ಯಕ್ರಮ ಗಟ್ಟಿ ಸಮಾಜ ಭವನದಲ್ಲಿ ನಡೆಯಿತು. ಸಾವಿರಾರು ಜನರ ಪ್ರಾಣ ಕಾಪಾಡಿದ *ಈಶ್ವರ್ ಮಲ್ಪೆ* ಕಲಶೆಯಲ್ಲಿಟ್ಟ ತೆನೆಗೆ ಹಾಲೆರೆದು ಉದ್ಳಾಟಿಸಿದರು. ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷ *ಸತೀಶ್‌ ಕುಂಪಲ* ಅಧ್ಯಕ್ಷತೆ ವಹಿಸಿದ್ದರು, ವಿಶೇಷ ಅತಿಥಿಗಳಾಗಿ ಬರ್ಕೆ ಪ್ರೆಂಡ್ಸ್ ಇದರ ಸ್ಥಾಪಕಾಧ್ಯಕ್ಷ *ಯಜ್ಞೇಶ್ ಬರ್ಕೆ*, ಮಂಗಳೂರು ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ದ ಅಧ್ಯಕ್ಷ *ವರದರಾಜ್ ಬಂಗೇರ ಉಳ್ಳಾಲ*, ಅಸ್ತೃ ಗ್ರೂಪ್ ಅಪ್ ಕಂಪೆನೀಸ್ ನ ಸಿ.ಇ.ಒ *ಲಾಂಚುಲಾಲ್ ಕೆ.ಎಸ್*, ತುಳು ಚಲನಚಿತ್ರ ನಟ *ಸ್ವರಾಜ್ ಶೆಟ್ಟಿ*, ಆಗಮಿಸಿದ್ದರು. ಸಾಯಿ ಪರಿವಾರ್ ನ ಟ್ರಸ್ಟಿಗಳಾದ ಗಣೇಶ್ ಅಂಚನ್, ಗೀತೇಶ್ ಕುತ್ತಾರ್, ಮಟನ್ ರಾಜಾ, ಪುರುಷೋತ್ತಮ ಕಲ್ಲಾಪು ಉಪಸ್ಥಿತರಿದ್ದರು. ಸ್ಥಾಪಕ ಟ್ರಸ್ಟಿ ಪ್ರವೀಣ್ ಎಸ್ ಕುಂಪಲ‌ ನಿರೂಪಿಸಿ, ಸ್ಥಾಪಕ ಸದಸ್ಯೆ ಧನಲಕ್ಷ್ಮಿ ಗಟ್ಟಿ ಸ್ವಾಗತಿಸಿದರು, ರಜನೀಶ್ ನಾಯಕ್ ವಂದಿಸಿದರು.



Related posts

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk

ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

*ವಿಜಯ ಕಾಲೇಜು ಮುಲ್ಕಿ*,*ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ*-ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಭಂಡಾರಿ ಆಯ್ಕೆ.

Mumbai News Desk

ಇಶಾನ್ ಅಂಚನ್ ಗೆ, ಜೇ ಇ ಮೈನ್ಸ್ ನಲ್ಲಿ 99.29% ಅಂಕ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (06/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು

Mumbai News Desk