30.5 C
Mumbai
June 8, 2026
Mumbai News Kannada
ಸುದ್ದಿ

ತೊಕ್ಕೊಟ್ಟು ಸಾಯಿ ಪರಿವಾರ್ ನ ಆಹಾರ ಸಾಮಗ್ರಿ‌ ಕಿಟ್ ಸ್ವೀಕರಿಸಿದ ನಿಜವಾದ ಅಶಕ್ತ ಬಂದುಗಳು, ಧನ್ಯತಾ ಭಾವ, ಸಾಯಿ ಸೇವೆಗೆ ಕೃತಜ್ಞತೆ. ತೆನೆಗೆ ಹಾಲೆರೆದು ಉದ್ಘಾಟಿಸಿದ ಜೀವ ರಕ್ಷಕ ಈಶ್ವರ್ ಮಲ್ಪೆ





ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಕಾರ್ಯಕ್ರಮ ಸಾಯಿ ಪರಿವಾರ್ ಸೇವಕರು ಗುರುತಿಸಿದ 200 ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಣಾ ಕಾರ್ಯಕ್ರಮ ಗಟ್ಟಿ ಸಮಾಜ ಭವನದಲ್ಲಿ ನಡೆಯಿತು. ಸಾವಿರಾರು ಜನರ ಪ್ರಾಣ ಕಾಪಾಡಿದ *ಈಶ್ವರ್ ಮಲ್ಪೆ* ಕಲಶೆಯಲ್ಲಿಟ್ಟ ತೆನೆಗೆ ಹಾಲೆರೆದು ಉದ್ಳಾಟಿಸಿದರು. ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷ *ಸತೀಶ್‌ ಕುಂಪಲ* ಅಧ್ಯಕ್ಷತೆ ವಹಿಸಿದ್ದರು, ವಿಶೇಷ ಅತಿಥಿಗಳಾಗಿ ಬರ್ಕೆ ಪ್ರೆಂಡ್ಸ್ ಇದರ ಸ್ಥಾಪಕಾಧ್ಯಕ್ಷ *ಯಜ್ಞೇಶ್ ಬರ್ಕೆ*, ಮಂಗಳೂರು ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ದ ಅಧ್ಯಕ್ಷ *ವರದರಾಜ್ ಬಂಗೇರ ಉಳ್ಳಾಲ*, ಅಸ್ತೃ ಗ್ರೂಪ್ ಅಪ್ ಕಂಪೆನೀಸ್ ನ ಸಿ.ಇ.ಒ *ಲಾಂಚುಲಾಲ್ ಕೆ.ಎಸ್*, ತುಳು ಚಲನಚಿತ್ರ ನಟ *ಸ್ವರಾಜ್ ಶೆಟ್ಟಿ*, ಆಗಮಿಸಿದ್ದರು. ಸಾಯಿ ಪರಿವಾರ್ ನ ಟ್ರಸ್ಟಿಗಳಾದ ಗಣೇಶ್ ಅಂಚನ್, ಗೀತೇಶ್ ಕುತ್ತಾರ್, ಮಟನ್ ರಾಜಾ, ಪುರುಷೋತ್ತಮ ಕಲ್ಲಾಪು ಉಪಸ್ಥಿತರಿದ್ದರು. ಸ್ಥಾಪಕ ಟ್ರಸ್ಟಿ ಪ್ರವೀಣ್ ಎಸ್ ಕುಂಪಲ‌ ನಿರೂಪಿಸಿ, ಸ್ಥಾಪಕ ಸದಸ್ಯೆ ಧನಲಕ್ಷ್ಮಿ ಗಟ್ಟಿ ಸ್ವಾಗತಿಸಿದರು, ರಜನೀಶ್ ನಾಯಕ್ ವಂದಿಸಿದರು.



Related posts

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಮುಂಬಯಿ ವಿಭಾಗದ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

Mumbai News Desk

ಛತ್ರಪತಿ ಶಿವಾಜಿ ಮಹಾರಾಜರ ಭೂಮಿಯಲ್ಲಿ ಡ್ಯಾನ್ಸ್ ಬಾರ್‌ಗಳಿಗೆ ನಿಷೇಧ ಹೇರಿದ ರಾಜ್ ಠಾಕ್ರೆ ಹೇಳಿಕೆಯ ಬೆನ್ನಲ್ಲೆ ಪನ್ವೇಲ್ ಬಾರ್ ಧ್ವಂಸಗೊಳಿಸಿದ ಎಂಎನ್‌ಎಸ್ ಕಾರ್ಯಕರ್ತರು

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk

ಇಂದು ಭಾರತ್ ಬಂದ್ : ದೇಶಾದ್ಯಂತ ವ್ಯಾಪಕ ಪ್ರತಿಭಟನೆ! ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವು

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.

Mumbai News Desk