30 C
Mumbai
April 24, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಮಾಜ ಸೂರತ್ : ನ. 24ರಂದು ಕರ್ನಾಟಕ ರಾಜ್ಯೋತ್ಸವ





 

ಕರ್ನಾಟಕ ಸಮಾಜ ಸೂರತ್ ಇದರ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಸಮಾರಂಭವು ಸೂರತ್ ನ ಜೀವನ್ ಭಾರತಿ ಸಭಾಂಗಣ, ನಾನ್ಪುರ, ಸೂರತ್ ಇಲ್ಲಿ ನ.  24ರಂದು ಮಧ್ಯಾಹ್ನ 2 ರಿಂದ ನಡೆಯಲಿದೆ. 

ಮಧ್ಯಾಹ್ನ ಸಮಾರಂಭದ ಉದ್ಘಾಟನೆಯನ್ನು ಬಂಟರ ಸಂಘ ಮುಂಬಯಿಯ ಎಸ್ ಎಂ ಶೆಟ್ಟಿ ಶಿಕ್ಷಣ ಸಂಸ್ಥೆಯ ಕಾರ್ಯಧ್ಯಕ್ಷ ರತ್ನಾಕರ್ ಶೆಟ್ಟಿ ಮುಂಡ್ಕೂರು ಇವರು ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ತುಳುಸಂಘ ಬರೋಡ ಇದರ ಅಧ್ಯಕ್ಷರಾದ ಶಶಿಧರ್ ಬಿ ಶೆಟ್ಟಿ, ಭಾರತ್ ಬ್ಯಾಂಕ್ ಮುಂಬಯಿಯ  ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಇವರು ಆಗಮಿಸಲಿರುವರು. 

ಮನೋರಂಜನೆಯ ಅಂಗವಾಗಿ ಶ್ರೀರಂಗ ಸಂಗಮ ಮುಂಬಯಿ ಹಾಗೂ ಊರಿನ ಮತ್ತು ಮುಂಬಯಿಯ ಕಲಾವಿದರ ಕೂಡುವಿಕೆಯಿಂದ ’ಪಾಪಣ್ಣ ವಿಜಯ ಗುಣಸುಂದರಿ ” ಯಕ್ಷಗಾನ ಪ್ರದರ್ಶನವಿದೆ. 

ಈ ಸಮಾರಂಭಕ್ಕೆ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಿ ಪ್ರೋತ್ಸಾಹಿಸಬೇಕಾಗಿ  ಕರ್ನಾಟಕ ಸಮಾಜ ಸೂರತ್ ಇದರ ಪರವಾಗಿ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ, ಗೌರವಾಧ್ಯಕ್ಷರಾದ ರಾಮಚಂದ್ರ ವಿ. ಶೆಟ್ಟಿ,  ಉಪಾಧ್ಯಕ್ಷರುಗಳಾದ ಉಮೇಶ್ ಸಫಲಿಗ,  ದಿವಾಕರ್ ಭಂಜನ್  ಬಾರ್ಡೊಲಿ,  ಅಜಿತ್ ಶೆಟ್ಟಿ ಅಂಕಲೇಶ್ವರ, ಪ್ರಭಾಕರ ಶೆಟ್ಟಿ ಕೋಸಂಬಾ, ಸಂತೋಷ್ ವಿ ಶೆಟ್ಟಿ, ನಾಗರಾಜ್ ಶೆಟ್ಟಿ, ಸಾಧು ಪೂಜಾರಿ, ಶ್ರೀಮತಿ ವನಿತಾ ಜೆ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಮೂಲ್ಯ ಕೆ, ಸಹ ಕಾರ್ಯದರ್ಶಿ ಶ್ರೀಮತಿ ಶಾಂತಿ ಡಿ ಶೆಟ್ಟಿ, ಖಜಾಂಚಿ ಚಂದ್ರಹಾಸ್ ಬಿ. ಸಪಲಿಗ,  ಖಜಾಂಚಿ ಸುಕ್ಷಿತ್ ಎಸ್, ಸಂಘಟನಾ ಕಾರ್ಯದರ್ಶಿ ಗಣೇಶ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ಸಲಹಾ ಸಮಿತಿಯ ಸದಸ್ಯರು, ಆರ್ಥಿಕ ಸಲಹಾ ಸಮಿತಿ, ಸಾಂಸ್ಕೃತಿಕ ಸಮಿತಿ, ಕ್ರೀಡಾ ಸಮಿತಿ, ಮಹಿಳಾ ವಿಭಾಗ ಹಾಗೂ ಇತರ ಸದಸ್ಯರು ವಿನಂತಿಸಿದ್ದಾರೆ.



Related posts

ಗೇರು ಬೀಜದ ಉತ್ಪನ್ನಗಳು, ಡ್ರೈ ಫ್ರುಟ್ಸ್ ಖಾದ್ಯಗಳು ಇದೀಗ ಮೂಲ್ಕಿಯಲ್ಲಿ ಲಭ್ಯ.

Mumbai News Desk

ಎ. 12 ರಿಂದ 18 ರ ವರಗೆ ಶ್ರೀ ಕ್ಷೇತ್ರ ಉಂಡಾರು ಶ್ರೀವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ವಾರ್ಷಿಕ ಉತ್ಸವ.

Mumbai News Desk

  ಪುಣೆ  ‌:ಸುಂದರ ಪೂಜಾರಿ ಕಾಣೆಯಾಗಿದ್ದಾರೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ (ಸಾವರ್ಕರ್ ನಗರ್ -ಥಾಣೆ)ಅ. 23ರಂದು ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

Mumbai News Desk

ಮರಳುಗಾಡಿನಿಂದ ಮಹಾನಗರಕ್ಕೆ ಗಮ್ಮತ್ ಕಲಾವಿದೆರ್, ಅ. 27ರಂದು ಕನ್ನಡ ಸಂಘ ಸಯನ್ ನ ವಾರ್ಷಿಕೋತ್ಸವದ ಅಂಗವಾಗಿ ದುಬಾಯಿಯ ಕಲಾವಿದರಿಂದ “ವಾ ಗಳಿಗೆಡ್ ಪುಟುದನಾ” ತುಳು ಹಾಸ್ಯಮಯ ನಾಟಕ ಪ್ರದರ್ಶನ

Mumbai News Desk