25 C
Mumbai
March 7, 2026
Mumbai News Kannada
ಕರ್ನಾಟಕ

ಕರ್ನಾಟಕ ವಿಧಾನಸಭಾ ಉಪಚುನಾವಣೆ – ಮೂರೂ ಕ್ಷೇತ್ರಗಳ್ಳಲ್ಲಿ ಕಾಂಗ್ರೇಸ್ ಭರ್ಜರಿ ಜಯ





ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆದಿದ್ದು, ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದಾರೆ.
ಇಡೀ ದೇಶದ ಗಮನಸೆಳೆದಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಗೆಲುವಾಗಿದ್ದು, ನಿಖಿಲ್ ಕುಮಾರಸ್ವಾಮಿ ಅವರು ಸೋತಿದ್ದಾರೆ . ಇದು ನಿಖಿಲ್ ಕುಮಾರಸ್ವಾಮಿ ಅವರ ಮೂರನೆ ಸೋಲಾಗಿದೆ.
ಸಂಡೂರು ಕ್ಷೇತ್ರ ಉಪಚುನಾವಣೆ ವ್ಯಕ್ತಿ ಪ್ರತಿಷ್ಠೆಗೆ ಸಾಕ್ಷಿಯಾಗಿದ್ದು, ಇದೀಗ ಫಲಿತಾಂಶ ಪ್ರಕಟವಾಗಿದ್ದು ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಗೆಲುವಾಗಿದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರು ಪರಭವಗೊಂಡಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಾಣವಾಗಿದ್ದ ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಯಾಸಿರ್ ಅಹಮದ್ ಖಾನ್ ಪಠಾಣ್ ಅವರು ಬಿಜೆಪಿಯ ಭರತ್ ಬೊಮ್ಮಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಎಲ್ಲಾ ಮೂರೂ ಕ್ಷೇತ್ರಗಳಲ್ಲಿ ಆಡಳಿತರೂಢ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆ ಉಂಟಾಗಿದೆ.



Related posts

ಈಗ ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ, ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಪುರುಷೋತ್ತಮ ಬಿಳಿಮಲೆ

Mumbai News Desk

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಶಾಂಕ್ ಎಸ್ ಶೆಟ್ಟಿಗೆ ಶೇಕಡಾ 97 ಅಂಕ

Mumbai News Desk

ಎಸ್ ಎಸ್ ಎಲ್ ಸಿ ಫಲಿತಾಂಶ -2025ಕೆ ಎಸ್ ರಾವ್ ಸ್ಮಾರಕ ಸರಕಾರಿ ಪ್ರೌಢಶಾಲೆ ಚಿತ್ರಾಪು, ಮುಲ್ಕಿ ವಿದ್ಯಾರ್ಥಿಗಳ ಸಾಧನೆ

Mumbai News Desk

ಧರ್ಮಸ್ಥಳ ಬುರುಡೆ ಕೇಸ್ನಲ್ಲಿ ಮೇಜರ್ ಟ್ವಿಸ್ಟ್, ಮಾಸ್ಕ್ ಮ್ಯಾನ್ ಅರೆಸ್ಟ್.

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನವಂಬರ್ 12ರವರೆಗೆ ಮಧ್ಯಂತರ ತಡೆ.

Mumbai News Desk

ಬೆಳಗಾವಿ : ಸದನದಲ್ಲಿ ಗೃಹಲಕ್ಷ್ಮಿ ಗದ್ದಲ; ತಪ್ಪೊಪ್ಪಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Mumbai News Desk