September 6, 2026
Mumbai News Kannada
ಮಹಾರಾಷ್ಟ್ರ

ಬಿಜೆಪಿ ನಿರ್ಧಾರಕ್ಕೆ ನನ್ನ ಬೆಂಬಲವಿದೆ – ಮೌನ ಮುರಿದ ಏಕನಾಥ್ ಶಿಂಧೆ






ಮುಖ್ಯ ಮಂತ್ರಿ ಹುದ್ದೆ ಬಗ್ಗೆ ಬಿಜೆಪಿ ನಿರ್ಧಾರ ತೆಗೆದುಕೊಳ್ಳುತ್ತದೆ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ, ಮೈತ್ರಿ ಕೂಟದಲ್ಲಿ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದು ಶಿವಸೇನಾ (ಶಿಂಧೆ ಬಣ )ನಾಯಕ, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ತಮ್ಮ ಸ್ವಗ್ರಾಮ ಡೇರ್ ತಾಂಬ್ ನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ನೂತನ ಸರಕಾರ ರಚನೆಯ ಬಗ್ಗೆ ಮಾತುಕತೆಗಳು ನಡೆಯುತಿವೆ. ಮಹಾಯುತಿ ಮೈತ್ರಿಕೂಟದ ಮಿತ್ರ ಪಕ್ಷಗಳಾದ ಬಿಜೆಪಿ, ಶಿವಸೇನೆ, ಎನ್ ಸಿ ಪಿ ಒಮ್ಮತದ ಮೂಲಕ ಎಲ್ಲಾ ನಿರ್ಧಾರ ತೆಗೆದುಕೊಳ್ಳುತೇವೆ ಎಂದು ಶಿಂಧೆ ಮಾಹಿತಿ ನೀಡಿದರು.
ಅಸಮಾಧಾನಗೊಂಡು ಸ್ವಗ್ರಾಮಕ್ಕೆ ತೆರಳಿದ್ದಾರೆ ಎಂಬ ವದಂತಿಗೆ ಪ್ರತಿಕ್ರಿಯಿಸಿದ ಶಿಂಧೆ ಅವರು “ನಾನು ನನ್ನ ಗ್ರಾಮಕ್ಕೆ ನಿಯಮಿತವಾಗಿ ಭೇಟಿ ನೀಡುತಿರುತ್ತೇನೆ. ಮುಖ್ಯಮಂತ್ರಿ ಹುದ್ದೆ ಬಗ್ಗೆ ಕಳೆದ ವಾರವೇ ನನ್ನ ನಿಲುವನ್ನು ಸ್ಪಷ್ಟ ಪಡಿಸಿದರೂ ಈ ಗೊಂದಲವೇಕೆ? ನಾವು ಜನರ ಅಶೋತ್ತರಗಳನ್ನು ಈಡೇರೇಸುತ್ತೇವೆ, ನಮ್ಮ ನಡುವೆ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದ ಶಿಂಧೆ ಅವರು ಮುಖ್ಯಮಂತ್ರಿ ಹುದ್ದೆ ಬಗ್ಗೆ ಬುಗಿಲೆದ್ದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.



Related posts

ಮಹಾರಾಷ್ಟ್ರದಲ್ಲಿ ಜೂನ್ 25ರಿಂದ ಮದ್ಯದ ಬೆಲೆ ಏರಿಕೆ

Mumbai News Desk

ಶ್ರೀ ರಾಮಚಂದ್ರಾಪುರ ಮಠದ ಭಾರತ ಮಂಡಲ, ಕೊಲಾಡಿನ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ವನಮಹೋತ್ಸವ

Mumbai News Desk

ಶ್ರೀ ದುರ್ಗಾ ಕಾಳಿ ಮಂದಿರದಲ್ಲಿ ನವರಾತ್ರಿ ಉತ್ಸವ.

Chandrahas

ಸಾಮಾನ್ಯ ಮನುಷ್ಯನನ್ನು ಸೂಪರ್ ಮ್ಯಾನ್ ಆಗಿ ಪರಿವರ್ತಿಸುತ್ತೇವೆ; ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಪ್ರತಿಕ್ರಿಯೆ

Mumbai News Desk

ಮಹಾರಾಷ್ಟ್ರ : ಸುನೇತ್ರಾ ಪವಾರ್ ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

Mumbai News Desk

ತುಕಾರಾಮ್ ಮುಂಢೆ ‘ಆ್ಯಕ್ಷನ್’ಗೆ ಮಹಾರಾಷ್ಟ್ರ FDA ವೇಗ: ಆಹಾರ ಮಾದರಿ ಸಂಗ್ರಹದಲ್ಲಿ ಶೇ.300ರಷ್ಟು ಏರಿಕೆ

Mumbai News Desk